ಕೈ ನಾಯಕರು ನಾಳೆ ದೆಹಲಿಗೆ

ಕೈ ನಾಯಕರು ನಾಳೆ ದೆಹಲಿಗೆ

ಬೆಂಗಳೂರು, ಸೆ. 10 : ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಸೇರಿದಂತೆ ಮತ್ತಿತರರು ನಾಯಕರು ದೆಹಲಿಗೆ ತೆರಳುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ನವದೆಹಲಿಗೆ ತೆರಳುತ್ತಿದ್ದು, ಗುರುವಾರ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರ ಸಭೆ ನಡೆಯುತ್ತಿದ್ದು, ಸೋನಿಯಾಗಾಂಧಿಯವರು ಅಧ್ಯಕ್ಷರಾದ ಮೇಲೆ ಪಕ್ಷ ಸಂಘಟನೆಗಾಗಿ ನಡೆಯುತ್ತಿರುವ ಮಹತ್ವದ ಮೊದಲ ಸಭೆ ಇದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos