ಕಲಬುರಗಿ ಜಿಲ್ಲೆಯಲ್ಲಿಂದು ಸಿದ್ದರಾಮಯ್ಯ ಮತಬೇಟೆ!

ಕಲಬುರಗಿ ಜಿಲ್ಲೆಯಲ್ಲಿಂದು ಸಿದ್ದರಾಮಯ್ಯ ಮತಬೇಟೆ!

ಕಲಬುರಗಿ, ಮೇ. 11, ನ್ಯೂಸ್ ಎಕ್ಸ್ ಪ್ರೆಸ್ರಾಜ್ಯದ ವಿಧಾನಸಭೆ ಚುನಾವಣೆಯ ಹಿನ್ನಲೆ ಮತಬೇಟೆಗಾಗಿ ಇಂದು ಸಮನ್ವಯ ಸಮಿತಿ ಅಧ್ಯಕ್ಷ  ಸಿದ್ದರಾಮಯ್ಯ ಇಂದು ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿ ಚುನಾವಣೆಯ ಪ್ರಚಾರ ನಡೆಸಲಿದ್ದಾರೆ.

ಮಾಜಿ‌ ಸಿಎಂ ಸಿದ್ದರಾಮಯ್ಯ ಇಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಅಣಕಲ್, ಕೋಡ್ಲಿ, ಚಿಮ್ಮಲಾ, ಇದಲಾಯಿ, ಚಿಂಚೋಳಿ ಪಟ್ಟಣದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ಸಂಸದ ಮಲ್ಲಿಕಾರ್ಜುನ್ ಖರ್ಗೆ, ಗೃಹ ಸಚಿವ ಎಂ.ಬಿ.ಪಾಟೀಲ್ ಇತರರು ಸಾಥ್ ನೀಡಲಿದ್ದಾರೆ.

ಇನ್ನೊಂದೆಡೆ, ಚಿಂಚೋಳಿ ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಪರ, ಕ್ಷೇತ್ರದ ವಿವಿಧೆಡೆ ಮಾಜಿ ಸಚಿವರಾದ ವಿ.ಸೋಮಣ್ಣ, ಬಾಬೂರಾವ್ ಚಿಂಚನಸೂರ್ ನೇತೃತ್ವದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಇನ್ನು, ಇಂದು ಸಂಜೆ ಚಿಂಚೋಳಿಯಲ್ಲಿ ಮಹಿಳಾ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಭಾಗವಹಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos