ಕಲಬುರಗಿ, ಸೆ. 10 : ಯುವಕನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿ, ಭೀಕರ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ. ಹಳೇಯ ವೈಷಮ್ಯವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಕರಜಗಿ ಗ್ರಾಮದ 28 ವರ್ಷದ ಸೈಬಣ್ಣ ನೀಲಕಂಠ ತಳವಾರ (28) ಗುಂಡಿನ ದಾಳಿಗೆ ಬಲಿಯಾದ ಯುವಕ. ರವಿ ತಳವಾರ ಅಲಿಯಾಸ್ ಅಭಯ್ ಕೊಲೆ ಮಾಡಿದ ಆರೋಪಿ.
ಆರೋಪಿ ರವಿ, ಸೈಬಣ್ಣನ ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿದ್ದಾನೆ. ಪರಿಣಾಮ ಸೈಬಣ್ಣ ಗಂಭೀರವಾಗಿ ಗಾಯಗೊಂಡು ಕುಸಿದು ಬಿದ್ದಿದ್ದಾನೆ. ಇದನ್ನು ನೋಡಿದ ಸ್ಥಳೀಯರು ತಕ್ಷಣವೇ ಆತನನ್ನು ಬೈಕ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿತ್ತು. ಹೀಗಾಗಿ ಜಿಲ್ಲಾಸ್ಪತ್ರಗೆ ರವಾನೆ ಮಾಡಲು ಮುಂದಾಗುತ್ತಿದ್ದಾಗ ಸೈಬಣ್ಣ ಸಾವನ್ನಪ್ಪಿದ್ದಾನೆ