“ತಾವೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ”

“ತಾವೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ”

ಮಂಡ್ಯ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ರಾಷ್ಟ್ರಮಟ್ಟದಲ್ಲೂ ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಪುತ್ರನ ಪರ ಮಂಡ್ಯದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಸುಮಲತಾ ಅಂಬರೀಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ, ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಆಸ್ಪತ್ರೆಗೆ ದಾಖಲಾಗುವ ಮೂಲಕ ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲು ಹೊಂಚು ಹಾಕುತ್ತಿದ್ದಾರೆ. ನಾವ್ಯಾರು ಇಂತಹ ಕುತಂತ್ರದ ರಾಜಕಾರಣ ಮಾಡುತ್ತಿಲ್ಲವೆಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos