ಕಲುಷಿತ ಆಹಾರ ಸೇವನೆ 1 ಸಾವು

  • In State
  • May 22, 2019
  • 219 Views
ಕಲುಷಿತ ಆಹಾರ ಸೇವನೆ 1 ಸಾವು

ತುಮಕೂರು, ಮೇ. 22, ನ್ಯೂಸ್ ಎಕ್ಸ್ ಪ್ರೆಸ್: ಇಂದು ಪಾವಗಡ ತಾಲ್ಲೂಕಿನ ನಿಡಗಲ್ ಗ್ರಾಮದಲ್ಲಿ ಕಲುಷಿತ ನೀರಿನಿಂದ ತಯಾರಿಸಿದರೆನ್ನಲಾದ ಆಹಾರ ಸ್ವೀಕರಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಶಿರಾದಿಂದ ತೆರಳಿದ್ದ ಭಕ್ತರು ಅಲ್ಲಿಯೇ ಪ್ರಸಾದ ರೂಪದಲ್ಲಿ ಅಡುಗೆ ಮಾಡಿ ಸೇವಿಸಿದ್ದರು. ನೀರಿಲ್ಲದ ಕಾರಣ ತೊಟ್ಟಿ ನೀರನ್ನು ಬಳಸಿ ಊಟ ಮಾಡಿದ್ದ ಹಿನ್ನೆಲೆಯಲ್ಲಿ ವಾಂತಿ, ಬೇಧಿ ಆರಂಭವಾಗಿತ್ತು. ಕೂಡಲೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ವೀರಭದ್ರ(12ವರ್ಷ) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಘಟನೆ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತುಮಕೂರು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದರು. ಜಿಲ್ಲಾ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos