ಬೆಂಗಳೂರು, ಸೆ. 11 : ಜಯನಗರದ ಅಶೋಕ್ ಪಿಲ್ಲರ್ ಬಳಿ ಬಸ್ ಗೆ ಕಿಡಿಗೇಡಿಗಳು ಕಲ್ಲು ಹೊಡೆದಿದ್ದಾರೆ. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಘಟನೆಯಲ್ಲಿ ಬಸ್ ಚಾಲಕನ ಬಲಭಾಗದಲ್ಲಿಯ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಬಿಎಂಟಿಸಿ ಮುನ್ನೇಚ್ಚರಿಕೆ ಕ್ರಮವಾಗಿ ಪ್ರತಿಭಟನೆ ಮತ್ತು ಮೆರವಣಿಗೆ ಸಾಗುವ ಮಾರ್ಗದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿತ್ತು. ಡಿ.ಕೆ.ಶಿವಕುಮಾರ್ ಬಂಧನದ ವೇಳೆ ಕಿಡಿಗೇಡಿಗಳು ಬಸ್ ಗಳ ಕಲ್ಲು ಹೊಡೆದಿದ್ದರು.