ಕಾಲುವೆಗೆ ಮಾತ್ರ ನೀರಿಲ್ಲ

ಕಾಲುವೆಗೆ ಮಾತ್ರ ನೀರಿಲ್ಲ

ರಾಯಚೂರು, ಸೆ. 1 : ನದಿ ಮೈತುಂಬಿ ಹರಿಯುತ್ತಿದ್ದರೂ ಕಾಲುವೆಗೆ ಮಾತ್ರ ನೀರಿಲ್ಲ. ಜಲಾಶಯದಿಂದ ಟಿಎಲ್ಬಿಸಿ ಕೆಳಭಾಗದ ಕಾಲುವೆಗೆ ಸಮರ್ಪಕ ನೀರು ದೊರೆಯುತ್ತಿಲ್ಲ. ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನೀರಿಲ್ಲದೆ ಭತ್ತದ ಬೆಳೆ ಒಣಗುತ್ತಿದೆ. ತಾಲೂಕಿನ ಮೇಲ್ಭಾಗದಲ್ಲಿ ನಾಲೆಯಿಂದ ಅಕ್ರಮವಾಗಿ ನದಿ ನೀರು ಬಳಕೆ ಮಾಡುತ್ತಿದ್ದ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಟಿಎಲ್ಬಿಸಿ ಕಾಲುವೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೇದಮೂರ್ತಿ ಅವರು ಉಪಕಾಲುವೆ ಹಾಗೂ ಕೆಳಭಾಗದ ನಾಲೆಗೆ ಹರಿಯುವ ನೀರಿನ ಗೇಜ್ ಪರಿಶೀಲನೆ ಮಾಡಿ, ಕೆಳಭಾಗದ ನಾಲೆಗೆ ನೀರು ಹರಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos