ಚೆನ್ನೈ, ಮೇ. 20, ನ್ಯೂಸ್ ಎಕ್ಸ್ ಪ್ರೆಸ್: ಸ್ವತಂತ್ರ ಭಾರತದ ಮೊದಲ ಉಗ್ರ ‘ಓಬ್ಬ ಹಿಂದು’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಅವರಿಗೆ ಮಧುರೈ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮೇ. 13 ರಂದು ತಮಿಳುನಾಡಿನ ಅರವಕುರಿಚಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ‘ಮಕ್ಕಳ್ ನೀಧಿ ಮಯ್ಯಂ’ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, “ನಾನೊಬ್ಬ ಹೆಮ್ಮೆಯ ಭಾರತೀಯ. ಆದರೆ ನಾನೊಂದು ಮಾತು ಹೇಳುತ್ತೇನೆ. ಇದು ಮುಸ್ಲಿಂ ಜನರೇ ಹೆಚ್ಚಿರುವ ಪ್ರದೇಶ ಎಂಬ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ಬದಲಿಗೆ ನಾನು ಗಾಂಧಿಜೀ ಅವರ ವಿಗ್ರಹದ ಮುಂದೆ ನಿಂತಿರುವ ಕಾರಣಕ್ಕೆ ಹೀಗೆ ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ, ಅವನ ಹೆಸರು ನಾಥುರಾಮ್ ಗೋಡ್ಸೆ. ಅಲ್ಲಿಂದ ಭಯೋತ್ಪಾದನೆ ಶುರುವಾಯಿತು” ಎಂದಿದ್ದರು.