ಕಮಲ ಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಕಮಲ ಹಾಸನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ನವದೆಹಲಿ, ಮೇ.14,ನ್ಯೂಸ್ ಎಕ್ಸ್ ಪ್ರೆಸ್ : ಹಿಂದು ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ನಟ ಕಮಲ ಹಾಸನ್‌ ವಿರುದ್ಧ ದೆಹಲಿಯ ಪಟಿಯಾಲಾ ಹೌಸ್‌ ಕೋರ್ಟ್‌ನಲ್ಲಿ ಕ್ರಿಮಿನಲ್‌ ಪ್ರಕರಣವನ್ನು ದಾಖಲಿಸಲಾಗಿದೆ.

ಮಕ್ಕಳ್‌ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕರಾಗಿರುವ ಕಮಲ ಹಾಸನ್‌ ಅರಾವಾಕುರಿಚಿ ವಿಭಾಸಭಾ ಕ್ಷೇತ್ರದ ಉಪಚುನಾವಣಾ  ಪ್ರಚಾರದ ವೇಳೆ ‘ಸ್ವತಂತ್ರ ಭಾರತದ ಮೊದಲ ಹಿಂದು ಉಗ್ರ ನಾಥುರಾಮ್‌ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದಾರೆ. ಕಮಲ ಹಾಸನ್‌ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹಿಂದುಗಳ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಸಹಿತ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಕಮಲಹಾಸನ್‌ ಅವರ ಚೆನ್ನೈ ನಿವಾಸದಲ್ಲಿ ಭದ್ರತೆ ಇನ್ನಷ್ಟು ಬಿಗಿ ಗೊಳಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos