ಕಮಲಹಾಸನ್ ವಿರುದ್ಧ ಎಐಎಡಿಎಂಕೆ ಸಚಿವ ವಾಗ್ದಾಳಿ..!

ಕಮಲಹಾಸನ್ ವಿರುದ್ಧ ಎಐಎಡಿಎಂಕೆ ಸಚಿವ ವಾಗ್ದಾಳಿ..!

ಚೆನ್ನೈ, ಮೇ. 14, ನ್ಯೂಸ್ ಎಕ್ಸ್  ಪ್ರೆಸ್ : ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ನಟ ಹಾಗೂ ಮಕ್ಕಳ ನೀಧಿ ಮೈಯಂ ಪಕ್ಷದ ಅಧ್ಯಕ್ಷ  ಕಮಲ್ ಹಾಸನ್ ಅವರ ನಾಲಿಗೆ ಕತ್ತರಿಸಬೇಕು ಎಂದು ತಮಿಳುನಾಡು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಅವರು ಹೇಳಿದ್ದಾರೆ.

ನಟ ಕಮಲ್ ಹಾಸನ್ ವಿರುದ್ಧ ವಾಗ್ದಾಳಿ ನಡೆಸಿ, ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ಮಕ್ಕಳ ನೀಧಿ ಮೈಯಂ ಪಕ್ಷವನ್ನು ನಿಷೇಧಿಸಬೇಕು. ಕಮಲ್ ಹಾಸನ್ ವಿರುದ್ಧ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.  ಒಬ್ಬ ವ್ಯಕ್ತಿ ಮಾಡಿದ ಕೃತ್ಯಕ್ಕೆ ಇಡೀ ಸಮುದಾಯವನ್ನು ದೂಷಿಸುವುದು ಸರಿಯಲ್ಲ ಎಂದು ತಮಿಳುನಾಡಿನ ಸಚಿವ ರಾಜೇಂದ್ರ ಬಾಲಾಜಿ ಕಿಡಿಕಾರಿದ್ದಾರೆ.  ಇನ್ನೊಂದೆಡೆ ಬಿಜೆಪಿ ವಕ್ತಾರ ಅಶ್ವಿನಿ ಉಪಾಧ್ಯಾಯ ಕಮಲ್​ ಹಾಸನ್ ವಿರುದ್ಧ ಕೇಂದ್ರ ಚುನಾವಣಾ ಆಯೋಗದ ಮೊರೆ ಹೋಗಿದ್ದಾರೆ. ಅಸಂಬದ್ಧ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಒಂದು ಧರ್ಮದ ಭಾವನೆಗೆ ಕಮಲ್ ಧಕ್ಕೆ ತಂದಿದ್ದಾರೆ ಎಂದು ಆಯೋಗಕ್ಕೆ ದೂರು ನೀಡಿದ್ದಾರೆ. ಅಲ್ಪ ಸಂಖ್ಯಾತ ಮತಗಳನ್ನು ಸೆಳೆಯುವುದಕ್ಕಾಗಿ ಕಮಲ್ ಹಾಸನ್ ಅವರು ಈ ರೀತಿ ನಟಿಸುತ್ತಿದ್ದಾರೆ ಎಂದು ಬಾಲಾಜಿ ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos