ಬಿಡದಿ ಪೋಲಿಸರಿಂದ ‘ಕಂಪ್ಲಿ ಕಾಂಗ್ರೆಸ್ ಶಾಸಕ’ ಗಣೇಶ್ ವಿರುದ್ಧ ಎಫ್ಐಆರ್ ದಾಖಲು

ಬಿಡದಿ ಪೋಲಿಸರಿಂದ ‘ಕಂಪ್ಲಿ ಕಾಂಗ್ರೆಸ್ ಶಾಸಕ’ ಗಣೇಶ್  ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂಪ್ಲಿ ಶಾಸಕ ಗಣೇಶ್ ವಿರುದ್ದ ಬಿಡದಿ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಗರದ ಹೊರವಲಯದ ಬಿಡದಿ ಬಳಿ ಈಗಲ್ಟನ್ ರೆಸಾರ್ಟ್ ನಲ್ಲಿ ಉಳಿದುಕೊಂಡಿದ್ದ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಮಧ್ಯೆ ಇಂದು ಮುಂಜಾನೆ ಸುಮಾರಿಗೆ ಮದ್ಯದ ಗುಂಗಿನಲ್ಲಿ ಹೊಡೆದಾಡಿಕೊಂಡಿದ್ದು, ಸದ್ಯ ಆನಂದ್ ಸಿಂಗ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಣೇಶ್ ವಿರುದ್ದ ಐಪಿಸಿ ಸೆಕ್ಷನ್ 323.324,504, 506 ರ ಅಡಿಯಲ್ಲಿ ಕೇಸ್ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos