ಅಯೋಧ್ಯೆ, ಮೇ 22,ನ್ಯೂಸ್ ಎಕ್ಸ್ ಪ್ರೆಸ್ : ಮದ್ಯದ ಅಮಲಿನಲ್ಲಿದ್ದ ಕಾಮುಕನೊಬ್ಬ ಗೋಶಾಲೆಯಲ್ಲಿದ್ದ ಮೂಕ ಹಸುಗಳ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಕೃತ್ಯ ಅಯೋಧ್ಯೆ ನಡೆದಿದೆ.
ನಗರದ ಕರ್ತಾಲಿಯ ಬಾಬಾ ಆಶ್ರಮದ ಗೋಶಾಲೆಯಲ್ಲಿ ಕಾಮುಕ 7 ಹಸುಗಳ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿಯ ರಾಜ್ಕುಮಾರ್ ಎಂಬುದು ತಿಳಿದು ಬಂದಿದೆ. ಕುಡಿದ ಅಮಲಿನಲ್ಲಿ ಆಶ್ರಮಕ್ಕೆ ಬರುತ್ತಿದ್ದ ಕಾಮುಕ ಗೋಶಾಲೆಯಲ್ಲಿದ್ದ ಏಳು ಹಸುಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಇದು ಗೋಶಾಲೆಯಲ್ಲಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ಆಶ್ರಮ ಸಿಬ್ಬಂದಿ ಹಾಗೂ ಸ್ವಯಂಸೇವಕರು ಕಾಮುಕನನ್ನು ಹಿಡಿದ್ದು ಸಖತ್ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511ರ ಪ್ರಾಣಿಗಳ ವಿರುದ್ಧ ಕ್ರೌರ್ಯ ನಡೆಸುವ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ವಿಚಾರಣೆ ವೇಳೆ ತಾನು ಕುಡಿದ ಮತ್ತಿನಲ್ಲಿ ಏನು ಮಾಡಿದೆ ಎಂದು ಗೊತ್ತಿಲ್ಲ. ಆದರೆ ಜನ ನನ್ನನ್ನು ಹೊಡೆದಿರುವುದು ಮಾತ್ರ ನೆನಪಿದೆ ಎಂದು ಹೇಳಿದ್ದಾನೆ.