ತಮಿಳುನಾಡು, ಮಾ. 21, ನ್ಯೂಸ್ ಎಕ್ಸ್ ಪ್ರೆಸ್: ತಮಿಳುನಾಡಿನ ಎಐಎಡಿಎಂಕೆ ಶಾಸಕ ಆರ್ ಕನಕರಾಜ್ ಅವರು ಇಂದು ಹೃದಯಾಘಾತದಿಂದ ಅಕಾಲಿಕ ಮರಣವನ್ನಪ್ಪಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.
ಕನಕರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಇ ಪಳನೀಸ್ವಾಮಿ ಸೇರಿದಂತೆ ಸರ್ಕಾರದ ಎಲ್ಲ ಸಚಿವರು, ಶಾಸಕರು ಕಂಬನಿ ಮಿಡಿದಿದ್ದಾರೆ. ಪ್ರತಿಪಕ್ಷ ಡಿಎಂಕೆ ನಾಯಕ ಎಂ ಕೆ ಸ್ಟಾಲಿನ್ ಸಹ ತಮ್ಮ ಸಂತಾಪ ಸೂಚಿಸಿದ್ದಾರೆ.