ಮೈಸೂರು, ಮಾ. 25, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಬಾ ಚುನಾವಣಯಲ್ಲಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ನರೇಂದ್ರ ಮೋದಿ ಅವರಿಗೆ ಆಗಲಾದರೂ ಈ ನಮ್ಮ ಕರ್ನಾಟಕ ರಾಜ್ಯದ ಕಷ್ಟಗಳ ಅರಿವಾಗಬಹುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕದಲ್ಲಿ ಯಾವುದಾದರೂ ಕ್ಷೇತ್ರದಿಂದ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಾರೆ ಎಂಬ ವದಂತಿ ಕೆಲವು ದಿನಗಳಿಂದ ಹಬ್ಬಿತ್ತು. ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಾರೆ ಎಂಬ ಕಾರಣಕ್ಕೇ ಬಿಜೆಪಿ ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ ಎನ್ನಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, ಮೋದಿಯವರು ಸ್ಪರ್ಧಿಸುವುದಾದರೆ ನಮ್ಮದೇನೂ ಅಭ್ಯಂತರವಿಲ್ಲ. ಸ್ವಾಗತಿಸುತ್ತೇವೆ. ಎಂದರು.