ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು

ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು

ಶ್ರೀನಗರ, ಜೂನ್. 11, ನ್ಯೂಸ್ ಎಕ್ಸ್ ಪ್ರೆಸ್  : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ವಿರುದ್ಧ ಮುಗಿ ಬಿದ್ದ ಸೇನೆ ಇಬ್ಬರು ಉಗ್ರರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.  ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಸ್ಥಳದಿಂದ ಹೊರಹೋಗುವ ಎಲ್ಲಾ ಸ್ಥಳಗಳನ್ನು ಬಂದ್ ಮಾಡಲಾಗಿದ್ದು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಸ್ವಯಂ ಚಾಲಿತ ಶಸ್ತ್ರಗಳಿಂದ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಉಗ್ರರು ಹತರಾಗಿದ್ದು, ಶೋಧ ಕಾರ್ಯಾಚರಣೆ ಇನ್ನು ಮುಂದುವರೆದಿತ್ತು. ಅವನಿರ್ ಪ್ರದೇಶದ ಸುತ್ತಮುತ್ತ ಪ್ರತಿಭಟನೆಯನ್ನು ತಡೆಯಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಶೋಪಿಯಾನ್ ನಲ್ಲಿ ಎಲ್ಲಾ ಮೊಬೈಲ್ ಸೇವೆಗಳನ್ನು  ಸ್ಥಗಿತಗೊಳಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos