ಕರ್ನಾಟಕದ ಹೆಮ್ಮೆಯ ಮಗ ವಿಶ್ವನಾಥ ಸಜ್ಜನರ್

ಕರ್ನಾಟಕದ ಹೆಮ್ಮೆಯ ಮಗ ವಿಶ್ವನಾಥ ಸಜ್ಜನರ್

ಹೈದರಾಬಾದ್, ಡಿ. 06: ದಿಶಾ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳನ್ನ ಇಂದು ಮುಂಜಾನೆ ಎನ್ಕೌಂಟರ್ ಮಾಡಲಾಗಿದೆ. ಎನ್ಕೌಂಟರ್ ನೇತೃತ್ವ ವಹಿಸಿದ್ದು, ಕನ್ನಡಿಗ ಅಧಿಕಾರಿ ಎಂದು ತಿಳಿದು ಬಂದಿದೆ.

ಹೌದು ಇಂದು ಬೆಳಗ್ಗಿನ ಜಾವ ಸುಮಾರು 03.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 44ರ ಶಾದ್ ನಗರ ಬಳಿ ನಡೆದ ಎನ್ ಕೌಂಟರ್ ಗೆ ವೈದ್ಯೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ಬಲಿಯಾಗಿದ್ದಾರೆ. ಈ ಎನ್ಕೌಂಟರ್ ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ನಡೆಸಿದ್ದಾರೆ. ವಿಶ್ವನಾಥ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಸಜ್ಜನರ್ ಈ ಹಿಂದೆ ವಾರಂಗಲ್ ಆ್ಯಸಿಡ್ ಪ್ರಕರಣದ ಆರೋಪಿಗಳನ್ನು ಎನ್ಕೌಂಟರ್ ಮಾಡಿದ್ದರು.

ಕರ್ನಾಟಕದ ಹುಬ್ಬಳ್ಳಿಯವರು:

ಎನಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ ಸಜ್ಜನರ್ ಮೂಲತಃ ಹುಬ್ಬಳ್ಳಿಯ ಪಗಣಿ ಓಣಿಯವರು. ತಂದೆ ಚನ್ನಬಸಪ್ಪ ಬಿ ಸಜ್ಜನ್, ಟ್ಯಾಕ್ಸ್ ಕನ್ಸಲ್ಟಂಟ್ ಆಗಿ ಕೆಲಸ ಮಾಡುತ್ತಿದ್ದರು. 3 ಜನ ಮಕ್ಕಳ ಪೈಕಿ ವಿಶ್ವನಾಥ ಸಜ್ಜನರ್ ಕಿರಿಯರು. ಹಿರಿಯ ಸಹೋದರ ಡಾ. ಮಲ್ಲಿಕಾರ್ಜುನ ಸಜ್ಜನರ್ ಮಕ್ಕಳ ತಜ್ಞರು.

ವಿಶ್ವನಾಥ ಸಜ್ಜನರ್, ಹುಬ್ಬಳ್ಳಿಯ ಲಾಯ್ಸ್ ಸ್ಕೂಲ್ನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಪಡೆದಿದ್ದರು. ಬಳಿಕ ಜೆಜಿ ಕಾಮರ್ಸ್ ಕಾಲೇಜಿನಲ್ಲಿ  ಬಿಕಾಂ ವ್ಯಾಸಂಗ ಪೂರೈಸಿ, ಕರ್ನಾಟಕದ ವಿಶ್ವವಿದ್ಯಾಲಯದಲ್ಲಿ ಕೌಶಾಳಿಯಲ್ಲಿ ಎಂಬಿಎ ವ್ಯಾಸಂಗ ನಡೆಸಿದ್ದಾರೆ. 1989 MBA ಪದವಿ ಗಳಿಸಿದ ಸಜ್ಜನರ್, 1996 ಯುಪಿಎಸ್ಇ ಪರೀಕ್ಷೆ ತೇರ್ಗಡೆ ಹೊಂದಿದ್ದರು. ಬಳಿಕ ಆಂದ್ರ ಪ್ರದೇಶದ ಕೇಡರ್ ಅಧಿಕಾರಿಯಾಗಿ ಸೇವೆಗೆ ಸಲ್ಲಿಸುತ್ತಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos