ಕನ್ನಡಿಗರ ದೇಹಗಳನ್ನು ತರಲು ಸಿದ್ಧತೆ

ಕನ್ನಡಿಗರ ದೇಹಗಳನ್ನು ತರಲು ಸಿದ್ಧತೆ

ಬೆಂಗಳೂರು, ಏ. 23, ನ್ಯೂಸ್ ಎಕ್ಸ್ ಪ್ರೆಸ್: ಶ್ರೀಲಂಕಾ ಪ್ರವಾಸಕ್ಕೆ ತೆರಳಿ ಬಾಂಬ್ ಸ್ಫೋಟ ಘಟನೆಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಸಿದ್ಧತೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ಮೃತದೇಹಗಳನ್ನು ಕಳುಹಿಸಿಕೊಡಲು ಸಿದ್ಧತೆ ಮಾಡಿದ್ದಾರೆ. ಅಲ್ಲದೆ, ಶ್ರೀಲಂಕಾ ಪ್ರವಾಸದಲ್ಲಿದ್ದ ಕೆಲವು ಕನ್ನಡಿಗರು ನಾಪತ್ತೆಯಾಗಿದ್ದು, ಅವರ ಪತ್ತೆಗೂ ಕೂಡ ಅಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos