ಕಣ್ಣು, ಕಿಡ್ನಿ ಮಾರಟಕ್ಕಿಟ ರೈತ

ಕಣ್ಣು, ಕಿಡ್ನಿ ಮಾರಟಕ್ಕಿಟ ರೈತ

ತುಮಕೂರು, ಆ.14 : ಕಣ್ಣು, ಕಿಡ್ನಿ ಮಾರುತ್ತೇನೆ, ನನಗೆ ಸಾಲ ತೀರಿಸಲು ದುಡ್ಡು ಕೊಡಿ ಎಂದು ಬೋರ್ಡ್ ಹಿಡಿದು ಶಿರಾ ತಾಲೂಕಿನಲ್ಲಿ ರೈತರೊಬ್ಬರು ಬೀದಿ ಬೀದಿ ಅಲೆಯುತ್ತಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಾಗೂಡಿನ ರೈತನಾದ ಚಂದ್ರಶೇಖರ್ 15 ವರ್ಷದ ಹಿಂದೆ ಪಿಎಲ್ಡಿ ಹಾಗೂ ಡಿಸಿಸಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದರು. ನಂತರ ಹಂತಹಂತವಾಗಿ ಸಾಲ ತೀರಿಸಿದ್ದರೂ ಕ್ಲಿಯರೆನ್ಸ್ ಸಿಗದೆ ಪಹಣಿಯಲ್ಲು ಇನ್ನೂ ಸಾಲವಿದೆ ಎಂದರು.
ಮೂರ್ನಾಲ್ಕು ಬೋರ್ ವೆಲ್ ಕೊರೆದರೂ ಕೂಡ ರೇಷ್ಮೆ ಬೆಳೆ ಕೈ ಹತ್ತದೆ ಸಾಲ ಮಾಡಿದ ಸಾಲವನ್ನು ತೀರಿಸಲಾಗದೆ ವಿಷವನ್ನು ಕುಡಿದಿದ್ದರು. ಅದೃಷ್ಟವಾಶಾತ್ ಬದುಕಿ ಬಂದು ಈಗ ಕೈ ಸಾಲ ಮಾಡಿ ಬ್ಯಾಂಕ್ ಸಾಲ ತೀರಿಸಿದ್ದರು. ಈಗ ಕೈ ಸಾಲ ತೀರಿಸಲಾಗದೆ ಕಿಡ್ನಿ ಮಾರುವ ಹಂತಕ್ಕೆ ಬಂದು ತುಲುಪಿದ್ದಾರೆ. ತಾವು ಬೋರ್ಡ ಹಾಕಿಕೊಂಡು ಬೀದಿ ಬೀದಿ ಅಲೆಯುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos