ಮೈಸೂರು, ಸೆ.7 : ಭಾರಿ ಮಳೆಯಿಂದಾಗಿ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕಪಿಲಾ ನದಿಗೆ ಬಾಗಿನ ಅರ್ಪಿಸಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕೃಷ್ಣರಾಜ ಸಾಗರ ಡ್ಯಾಂಗೆ ಮುಖ್ಯಮಂತ್ರಿ ಬ್ರಹ್ಮ ಭಾನುಪ್ರಕಾಶ್ ಶರ್ಮಾ ತಂಡದ ನೇತೃತ್ವದಲ್ಲಿ ಬಾಗಿನ ಅರ್ಪಿಸಿದ್ದರು.
ಇದಕ್ಕೂ ಮುನ್ನ ಚಾಮರಾಜನಗರ ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿ ಮಾತನಾಡಿದ ಅವರು. ನೆರೆ ಪರಿಹಾರ ಸಂಬಂಧ ಪ್ರಧಾನಿ ಜತೆ ಚರ್ಚಿಸಿದ್ದೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಪ್ರಧಾನಿ ಮೋದಿ ಅವರು ಇಸ್ರೋಗೆ ಆಗಮಿಸಿ ಭಾಷಣ ಮಾಡಿ ಹೊರಟಿದ್ದಾರೆ.