ನವದೆಹಲಿ, ಅ, 2 : ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಮೂವರ ಸದಸ್ಯರ ಕ್ರಿಕೆಟ್ ಸಲಹಾ ಸಮಿತಿಗೆ ರಾಜಿನಾಮೆ ಸಲ್ಲಸಿದ್ದಾರೆ ಎಂದು ಮೂಲದಿಂದ ತಿಳಿದು ಬಂದಿದೆ. ಕ್ರಿಕೆಟ್ ಸಲಹಾ ಸಮಿತಿಗೆ ಕಪಿಲ್ ದೇವ್ ರಾಜಿನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ಸಲ್ಲಿಸಿದ್ದಾರೆಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಕ್ರಿಕೆಟ್ ಆಡಳಿತ ಮಂಡಳಿ ಸಮಿತಿ ಮುಖ್ಯಸ್ಥ ವಿನೋದ ರಾಯ್ ಅವರು ಕ್ರಿಕೆಟ್ ಸಲಹಾ ಸಮಿತಿಯನ್ನು ಭಾರತ ತಂಡ ಕೋಚ್ ನೇಮಕ ಮಾಡುವ ಉದ್ದೇಶದಿಂದ ತಾತ್ಕಾಲಿಕ ರಚಿಸಲಾಗಿತ್ತು ಎಂದರು. ಈಗಾಗಲೇ ಕೋಚ್ ನೇಮಕ ಮುಕ್ತಾಯವಾಗಿದೆ.