ಕಾರವಾರ, ಆ. 31 : ಜಿಲ್ಲೆಯಲ್ಲಿ ಭಾರಿ ಮಳೆಗೆ ರಸ್ತೆಯ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೈ ವೆ ರಸ್ತೆಗಳು ಜಲಾವೃತ್ತವಾಗಿದ್ದು, ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾಗಿದೆ.
ಕಾರವಾರದಲ್ಲೂ ಶುಕ್ರವಾರ ರಾತ್ರಿಯಿಂದ ಮಳೆ ಮುಂದುವರೆದಿದೆ. ತಾಲ್ಲೂಕಿನಲ್ಲಿ ಈಚೆಗೆ ಕಾಳಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಲಿದ್ದಾರೆ.