ಕರ್ನಾಟಕದಿಂದ ಬಾಂಗ್ಲಾದೇಶಿಯರನ್ನು ಓಡಿಸಿ: ತೇಜಸ್ವಿ ಸೂರ್ಯ

ಕರ್ನಾಟಕದಿಂದ ಬಾಂಗ್ಲಾದೇಶಿಯರನ್ನು ಓಡಿಸಿ: ತೇಜಸ್ವಿ ಸೂರ್ಯ

ನವದೆಹಲಿ, ಜು. 10 : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ಆಕ್ರಮ ಬಾಂಗ್ಲಾದೇಶಿ ವಲಸಿಗರು ಕರ್ನಾಟಕದ ಭದ್ರತೆಗೆ ಸವಾಲಾಗಿದ್ದು, ಕೇಂದ್ರ ಸರ್ಕಾರ ಎನ್ಆರ್ಸಿಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಸಂಸತ್ನಲ್ಲಿ ಮನವಿ ಮಾಡಿದ್ದಾರೆ.

ಇಂದು ಸಂಸತ್ ಕಲಾಪವನ್ನುದ್ದೇಶಿಸಿ ಮಾತನಾಡಿದ ಅವರು , ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ ಉಗ್ರರು ಬೆಂಗಳೂರಿನಲ್ಲೇ ಅತ್ಯಂತ ಅಪಾಯಕಾರಿ ರಾಕೆಟ್ ಬಾಂಬ್ ಮತ್ತಿತರ ಸ್ಫೋಟಕಗಳನ್ನು ತಯಾರಿಸಿ ದೇಶದ ವಿರುದ್ಧ ಭಯೋತ್ಪಾದನಾ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿರುವ ವಿಚಾರವನ್ನು ಪ್ರಸ್ತಾವಿಸಿದರು.

ಎನ್ ಆರ್ಸಿಯನ್ನು ಬೆಂಗಳೂರು ಮತ್ತು ಕರ್ನಾಟಕಕ್ಕೂ ವಿಸ್ತರಿಸಿ ಆಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಹೊರ ಹಾಕುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos