ನವದೆಹಲಿ, ಜು. 22 : ವಿಶ್ವಕಪ್ ನಂತರ ಧೋನಿ ಕ್ರಿಕೆಟಿಗೆ ನಿವೃತ್ತಿ ಹೇಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವಿಂಡೀಸ್ ಪ್ರವಾಸದಲ್ಲಿ ಟೀಂ ಇಂಡಿಯಾದಲ್ಲಿ ಭಾಗಿಯಾಗದ ಕಾರಣ ನಿವೃತ್ತಿ ಹೇಳುತ್ತಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಈಗ ಧೋನಿ ತನ್ನ ಆಸೆಯನ್ನು ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು. ಇದೀಗ ಧೋನಿ ಅವರ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.