ರಾಜ್ಯ ಉಸ್ತುವಾರಿ ಸ್ಥಾನ’ಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ

ರಾಜ್ಯ ಉಸ್ತುವಾರಿ ಸ್ಥಾನ’ಕ್ಕೆ ಕೆ.ಸಿ.ವೇಣುಗೋಪಾಲ್ ರಾಜೀನಾಮೆ

ನವದೆಹಲಿ, ಡಿ. 10: ರಾಜ್ಯದ ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದೆ. ನಿನ್ನೆಯಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷ ಸ್ಥಾನಕ್ಕೆ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇವರ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ನೀಡಿದ್ದರು. ಇದೀಗ ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿದ್ದ ಕೆ.ಸಿ.ವೇಣುಗೋಪಾಲ್ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ತಮ್ಮ ರಾಜೀನಾಮೆ ಪತ್ರವನ್ನು ಈಗಾಗಲೇ ಕೆ.ಸಿ.ವೇಣುಗೋಪಾಲ್ ಅವರು ಸೋನಿಯಾಗಾಂಧಿಯವರಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಮುಂದಿನ ವಾರದೊಳಗೆ ಶೀಘ್ರದಲ್ಲಿ ಮತ್ಮೊಬ್ಬರನ್ನು ನೇಮಕ ಮಾಡಲಾಗುವುದು ಎನ್ನಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos