ಚಿಕ್ಕಮಗಳೂರು: ನಮ್ಮ ಕರ್ನಾಟಕ ರಾಜ್ಯದಲ್ಲಿ ಹೆಚ್ಚು ಪ್ರವಾಸಿ ತಾಣಗಳಲ್ಲಿ ಕೆಮ್ಮನಗುಂಡಿಯೂ ಒಂದು. ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮನಗುಂಡಿ ಗುಡ್ಡದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮನಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದಾಗಿ ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾವುತಿಯಾಗಿದೆ.
ಬಿಸಿಲಾ ಝುಳ ದಿನದಿಂದ ದಿನಕ್ಕೆ ಏರುತ್ತಿದ್ದು ಚಿಕ್ಕಮಂಗಳೂರು ಪಕ್ಷಿಮಗಟ್ಟ ಭಾಗದಲ್ಲಿ ಕಾಡ್ಗಿಚ್ಚುಗಳು ಸಂಭವಿಸುತ್ತಿವೆ. ಬೆಂಕಿಯ ಕೆನ್ನಾಳಿಕೆಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ಪ್ರಾಣಿ ಪಕ್ಷಿಗಳು ನಾಶವಾಗಿವೆ.
ಅರಣ್ಯ ಪ್ರದೇಶ ಬೆಂಕಿಯಲ್ಲಿ ದಗದಗಿಸಿ ಉರಿಯುತ್ತಿದೆ ಅರಣ್ಯ ಇಲಾಖೆ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಅರಸಾಹಸ ಪಟ್ಟಿದ್ದಾರೆ. ನಿನ್ನೆ ರಾತ್ರಿಯಿಂದ ಕೆಮ್ಮನಗುಂಡಿ ಬೆಟ್ಟ ಕಾಡಿಗೆ ಚೆಂದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ.