ಕೇರಳದ ಶ್ರೀ ಕೃಷ್ಣನ ಸನ್ನಿಧಿ: ‘ನಮೋ’ಗೆ ತುಲಾಭಾರ

ಕೇರಳದ ಶ್ರೀ ಕೃಷ್ಣನ ಸನ್ನಿಧಿ: ‘ನಮೋ’ಗೆ ತುಲಾಭಾರ

ತಿರುವನಂತಪುರಂ, ಜೂನ್. 8, ನ್ಯೂಸ್ ಎಕ್ಸ್ ಪ್ರೆಸ್: ಪ್ರಧಾನಿ ಮೋದಿ ಅವರು ಮಾಲ್ಡೀವ್ಸ್‍ಗೆ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದು, ಆದಕ್ಕೂ ಮುನ್ನ ಬೆಳಗ್ಗೆ ಕೇರಳದ ಗುರುವಾಯುರ್ ಸನ್ನಿಧಿಯಲ್ಲಿಯಲ್ಲಿ ತುಲಾಭಾರ ಮಾಡಿಸಿದ್ದಾರೆ. ಲೋಕಸಭಾ ಚುನಾವಣೆಯ ಭರ್ಜರಿ ಗೆಲುವಿನ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿ 5 ಸಾವಿರ ವರ್ಷಗಳ ಇತಿಹಾಸ ಇರುವ ಗುರುವಾಯುರ್ ಶ್ರೀ ಕೃಷ್ಣನ ದರ್ಶನ ಪಡೆದರು.

ಬಿಳಿ ಬಣ್ಣದ ಧೋತಿ ಮತ್ತು ಶಲ್ಯ ಧರಿಸಿದ್ದ ಮೋದಿ ಅವರು ಬಿಜೆಪಿಯ ಚಿಹ್ನೆಯಾದ ಕಮಲದ ಹೂಗಳಿಂದ ತುಲಾಭಾರ ಮಾಡಿಸಿಕೊಂಡರು. ಒಂದು ಗಂಟೆಯ ದರ್ಶನದ ನಂತರ ಮೋದಿ ಅವರು, ಕೇರಳದ ಬಿಜೆಪಿ ಸಮಿತಿ ಗುರುವಾಯುರ್‍ ನಲ್ಲಿ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos