ಕೀಚಕ ಗಂಡ

ಕೀಚಕ ಗಂಡ

ಬೆಂಗಳೂರು, ಡಿ. 04: ಹೆಂಡತಿಯನ್ನು ಹತ್ಯೆ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದ ಗಂಡ ಆಕೆಯನ್ನು ನಂದಿ ಬೆಟ್ಟದ ಮಾರ್ಗದಲ್ಲಿ ಜಾಲಿರೈಡ್ ಕರೆದೊಯ್ದು ಹತ್ಯೆ ಮಾಡಿದ್ದಾನೆ. ನ.16ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ತೇಜ್ ಸಿಂಗ್ ಕೊಲೆ ಮಾಡಿದ ಆರೋಪಿ. ಈತ ಪತ್ನಿ ದೀಪಲ್ ಕಂವಾರ್ಳನ್ನು ಹತ್ಯೆ ಮಾಡಿದ್ದಾನೆ. ಇಬ್ಬರೂ ಮೂಲತಃ ರಾಜಸ್ಥಾನದವರು. ಈ ದಂಪತಿ ಹುಣಿಸೇಮಾರನಹಳ್ಳಿ ಬಳಿಯ ಜನತಾ ಕಾಲೋನಿಯಲ್ಲಿ ವಾಸವಿದ್ದರು. ದಂಪತಿ ಚಿಕ್ಕ ಚಿನ್ನದ ಮಳಿಗೆ ಹೊಂದಿದ್ದರು. ಇಬ್ಬರ ನಡುವೆ ನಿತ್ಯ ಮನಸ್ತಾಪ ನಡೆಯುತ್ತಿತ್ತು. ಇದರಿಂದ ರೋಸಿ ಹೋದ ತೇಜ್ ಪತ್ನಿಯನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ.

ಕಾರು ಬಾಗಿಲು ತೆಗೆದು ಹೆಂಡತಿಯನ್ನು ಕೆಳಗೆ ತಳ್ಳಿದ್ದ, ಅಷ್ಟೇ ಅಲ್ಲ, 4-5 ಬಾರಿ ಆಕೆಯ ಮೇಲೆ ಕಾರು ಹತ್ತಿಸಿದ್ದ. ನಂತರ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ.

ಕಾರಿನ ಜಿಪಿಎಸ್ ಪರಿಶೀಲಿಸಿದಾಗ ಅಪಘಾತ ಸ್ಥಳದಲ್ಲಿ ಕಾರು ಹಿಂದೆ ಮುಂದೆ ಚಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಬಳಿಕ ತೇಜ್ ಸಿಂಗ್ ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಆಗ ಕೃತ್ಯದ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ.

ಫ್ರೆಶ್ ನ್ಯೂಸ್

Latest Posts

Featured Videos