ಖರ್ಗೆ ಸೋಲು ಖಚಿತ : ಬಿಎಸ್ ವೈ

ಖರ್ಗೆ ಸೋಲು ಖಚಿತ : ಬಿಎಸ್ ವೈ

ಉಡುಪಿ, . 8, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ರಬರು, ಲೋಕಸಭೆ ಚುನಾವಣೆಯಲ್ಲಿ ಸಂಸದ ಮಲ್ಲಿಕಾರ್ಜುನ ಖರ್ಗೆ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಗವೇಂದ್ರ ಪರ ಪ್ರಚಾರದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ದೇವರ ದಯೆ ಇದ್ದರೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮನೆಗೆ ಹೋಗುತ್ತಾರೆ, ಬಿಜೆಪಿ ದೇಶದಲ್ಲಿ 300 ಸೀಟು, ಕರ್ನಾಟಕದಲ್ಲಿ 22 ಸ್ಥಾನ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ದೇಶವನ್ನು ದಿವಾಳಿ ಮಾಡಿತ್ತು. ಆದರೆ ಪ್ರಧಾನಿ ಮೋದಿ ದೇಶವನ್ನು ಸದೃಢವನ್ನಾಗಿ ಮಾಡಿದ್ದಾರೆ. ರಾಹುಲ್ ಗಾಂಧಿ ಒಬ್ಬ ಬಚ್ಚಾ, ರಾಹುಲ್ ಹುಡುಗಾಟಿಕೆ ಮಾತು ಆಡುತ್ತಾನೆ, ಕುಮಾರಸ್ವಾಮಿ ಬೇಜವಾಬ್ದಾರಿ ಸಿಎಂ, ಇವರ ಹೇಳಿಕೆಯಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos