ಖರ್ಗೆಗೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ.!

ಖರ್ಗೆಗೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ.!

ಕಲಬುರಗಿ, ಏ. 30, ನ್ಯೂಸ್ ಎಕ್ಸ್ ಪ್ರೆಸ್: ಕಲಬುರ್ಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಉಮೇಶ್ ಜಾಧವ್ ಅವರು, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆಗೆ ಹಣ ಬಲ ಎಷ್ಟಿದೆ ಅಂತಾ ಎಲ್ಲರಿಗೂ ಗೊತ್ತು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವ ಅಂದರೆ ಹಣದಿಂದ, ಹಣಕ್ಕಾಗಿ, ಹಣಕ್ಕೋಸ್ಕರ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಗವರ್ನಮೆಂಟ್ ಆಫ್ ಮಲ್ಲಿಕಾರ್ಜುನ ಖರ್ಗೆ, ಫಾರ್ ಪ್ರಿಯಾಂಕ್ ಖರ್ಗೆ, ಫಾರ್ ದಿ ಪಿಪಲ್ ಆಫ್ ಪ್ರಿಯಾಂಕ್ ಖರ್ಗೆ. ಇದು ಮಲ್ಲಿಕಾರ್ಜುನ ಖರ್ಗೆರವರ ಪ್ರಿನ್ಸಿಪಲ್ ಎಂದರು. ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ಬಿಟ್ಟು ದೇವರಾಜ ಅರಸು ಜೊತೆ ಹೋಗಿ ಮತ್ತೆ ಪಕ್ಷಕ್ಕೆ ಮರಳಿದರು. ಮಾಜಿ ಮುಖ್ಯಂಮತ್ರಿ ಸಿದ್ದರಾಮಯ್ಯ ಜೆಡಿಎಸ್ ಬಿಟ್ಟಿದ್ದರು, ಇವರೆಲ್ಲ ದುಡ್ಡು ತಗೆದುಕೊಂಡು ಪಕ್ಷ ಬಿಟ್ರಾ? ಎಂದು ಜಾಧವ್ ಪ್ರಶ್ನಿಸಿದರು.

ನನ್ನ ಮೇಲೆ ಆರೋಪ ಮಾಡಲು ಯಾವುದೇ ವಿಷಯವಿಲ್ಲ. ಹೀಗಾಗಿ ಪದೇಪದೇ ಮಾರಾಟವಾಗಿದ್ದೀರಾ ಅಂತಾ ಹೇಳುತ್ತಾರೆ. ಮಲ್ಲಿಕಾರ್ಜುನ ಖರ್ಗೆ ತುಂಬಾ ಬಲಿಷ್ಠರಿದ್ದಾರೆ, ಪವರ್ಫುಲ್ ಆನ್ ದಿ ಅರ್ಥ್. ದಿ ಗ್ರೇಟ್ ಲೀಡರ್ ಮಲ್ಲಿಕಾರ್ಜುನ ಖರ್ಗೆ ಅವರು, ಯಾವುದಾದರೂ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಲಿ. ಜಗತ್ತಿನ ಯಾವುದೇ ಏಜೆನ್ಸಿ ಮೂಲಕ ತನಿಖೆ ಮಾಡಿಸಿ, ದುಡ್ಡು ಪಡೆದದ್ದು ಪ್ರೂವ್ ಮಾಡಿದ್ರೆ, ರಾಜಕೀಯ ನಿವೃತ್ತಿ ಪಡೆಯುವೆ. ಪದೇ ಪದೇ ಮಾರಾಟವಾಗಿದ್ದೀರ? ಅಂತಾ ಹೇಳಿಕೆ ಕೊಟ್ಟರೆ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಜಾಧವ್ ಎಚ್ಚರಿಕೆ ನೀಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos