ಚುನಾವಣೆ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ: ಕಿಚ್ಚ

ಚುನಾವಣೆ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ: ಕಿಚ್ಚ

ಬೆಂಗಳೂರು: ಕಿಚ್ಚ ಸುದೀಪ್ ಕ್ರಿಕೆಟ್ ಟೀಂ ಮೇಟ್, ನಟ, ಕಿರಿಯ ಮಿತ್ರ ಚಂದನ್​ರ ಹೊಸ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ಸುದೀಪ್, ಈ ಬಗ್ಗೆ ಮಾತನಾಡಿದ್ದಾರೆ.

ಚುನಾವಣೆ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ ಎಂದು ನಟ ಕಿಚ್ಚ ಸುದೀಪ್ ಅವರು ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕಿಚ್ಚ ಸುದೀಪ್ ಸದ್ಯ ಯಾರು ನನ್ನನ್ನು ಪ್ರಚಾರಕ್ಕೆ ಕರೆದಿಲ್ಲ ಚುನಾವಣೆ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ ಎಂದು ಹೇಳಿದ್ದಾರೆ ಇನ್ನೂ ಚಿನ್ಮ ಶೂಟಿಂಗ್ ಬಾಕಿ ಇದೆ ಸಿನಿಮಾ ಶೂಟಿಂಗ್ ಮುಗಿದ ಬಳಿಕ ನೋಡೋಣ ಪ್ರಚಾರಕ್ಕೆ ಕರೆದರೆ ಖಂಡಿತ ಹೋಗುತ್ತೇನೆ ಪ್ರಚಾರ ಮಾಡಿದರು.

‘ಕಳೆದ ಬಾರಿ ಯಾರಿಗಾಗಿ, ಯಾವ ಕಾರಣಕ್ಕಾಗಿ ಪ್ರಚಾರಕ್ಕೆ ಹೋಗಿದ್ದೆ ಎಂಬುದನ್ನು ನಾನು ಸ್ಪಷ್ಟಪಡಿಸಿದ್ದೆ. ಈ ಬಾರಿ ಇನ್ನೂ ಸಹ ಯಾರೂ ನನ್ನನ್ನು ಪ್ರಚಾರಕ್ಕಾಗಿ ಕೇಳಿಲ್ಲ. ಕೇಳಿದಾಗ ಆ ಬಗ್ಗೆ ನಿರ್ಣಯ ಮಾಡುತ್ತೇನೆ’ ಎಂದಿದ್ದಾರೆ. ಮುಂದುವರೆದು, ‘ಸಿನಿಮಾ ಬಿಟ್ಟು ಕ್ರಿಕೆಟ್​ನಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಈಗಾಗಲೇ ಅಭಿಮಾನಿಗಳು, ಗೆಳೆಯರು ಗಲಾಟೆ ಮಾಡುತ್ತಿದ್ದಾರೆ. ಇಂಥಹಾ ಹೊತ್ತಿನಲ್ಲಿ. ಶೂಟಿಂಗ್ ಬಿಟ್ಟು ರಾಜಕೀಯ ಪ್ರಚಾರಕ್ಕೆ ಹೋದರೆ ಇನ್ನಷ್ಟು ಗಲಾಟೆಗಳಾಗುತ್ತವೆಯೋ ಏನೋ’ ಎಂದು ತಮಾಷೆ ಮಾಡಿದರು.

ಸುದೀಪ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ? ಎಂಬ ಪ್ರಶ್ನೆಗೆ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ ಸುದೀಪ್, ‘ನೋಡಿ ಈಗ ನಾನು ಹೋಟೆಲ್​ ಉದ್ಘಾಟನೆಗೆ ಬರಲ್ಲ ಅಂದುಕೊಂಡಿದ್ದರು ಆದರೆ ಬಂದಿದ್ದೇನೆ. ಹಾಗೆಯೇ ರಾಜಕೀಯದ್ದು ಏನಾಗುತ್ತದೆಯೋ ನೋಡೋಣ. ಎಲ್ಲರೂ ಬರೊಲ್ಲ ಅಂದುಕೊಂಡಿದ್ದಾರೆ, ಬಂದಾಗ ಗೊತ್ತಾಗುತ್ತದೆ. ಒಂದೊಮ್ಮೆ ಬರಲಿಲ್ಲ ಎಂದರೆ ಬರಲಿಲ್ಲ ಅಷ್ಟೆ’ಎಂದರು ಸುದೀಪ್.

 

ಫ್ರೆಶ್ ನ್ಯೂಸ್

Latest Posts

Featured Videos