ಹುಡುಗಿಗೆ ಮೆಸೇಜ್: ಚಾಕುವಿನಿಂದ ಇರಿದು ಕಾಲೇಜು ವಿದ್ಯಾರ್ಥಿ ಕೊಲೆ

ಹುಡುಗಿಗೆ ಮೆಸೇಜ್: ಚಾಕುವಿನಿಂದ ಇರಿದು ಕಾಲೇಜು ವಿದ್ಯಾರ್ಥಿ  ಕೊಲೆ

ಬೆಂಗಳೂರು: ಯುವತಿಯ ವಿಚಾರಕ್ಕೆ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿಯನ್ನೇ ಕೊಲೆ ಮಾಡಿದ ಘಟನೆ ಇಂದು ಬೆಳಗ್ಗೆ ಬೆಂಗಳೂರಿನ 8ನೇ ಮೈಲಿಯ ಸೌಂದರ್ಯ ಪಿಯು ಕಾಲೇಜಿನಲ್ಲಿ ನಡೆದಿದೆ.

ರಕ್ಷಿತ್ (18) ತನ್ನ ಸಹಪಾಠಿ ದಯಾಸಾಗರ್ (18)ನನ್ನು ಚಾಕುಯಿಂದ ಇರಿದು ಕೊಲೆ ಮಾಡಿದ್ದಾನೆ. ದಯಾಸಾಗರ್ ಹಾಗೂ ರಕ್ಷಿತ್ ಇಬ್ಬರು ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಸೌಂದರ್ಯ ಕಾಲೇಜಿನಲ್ಲಿ ಓದುತ್ತಿದ್ದರು. ದಯಾಸಾಗರ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡುತ್ತಿದ್ದನು. ಈ ಬಗ್ಗೆ ರಕ್ಷಿತ್ ಹಲವು ಬಾರಿ ಗುಂಪು ಕಟ್ಟಿಕೊಂಡು ದಯಾಸಾಗರ್ ಗೆ ವಾರ್ನ್ ಕೂಡ ಮಾಡಿದ್ದನು.

ಇಬ್ಬರು ಕಾಲೇಜಿನಲ್ಲೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ರಕ್ಷಿತ್ ಬ್ಯಾಗಿನಲ್ಲಿದ್ದ ಚಾಕು ತೆಗೆದು ದಯಾಸಾಗರ್ ಇರಿದಿದ್ದಾನೆ. ದಯಾಸಾಗರ್ ನನ್ನು ಸಹಪಾಠಿಗಳು ಹಾಗೂ ಅಧ್ಯಾಪಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೀವ್ರ ರಕ್ತಸ್ರಾವ ಉಂಟಾಗಿ ದಯಾಸಾಗರ್ ಮೃತಪಟ್ಟಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಕ್ಷಿತ್ ಸೇರಿ
ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos