ಸ್ವಂತ ಮಗುವನ್ನು ಸಾಯಿಸಿ ತಾಯಿಯೂ ಆತ್ಯಹತ್ಯೆ ಗೆ ಯತ್ನ

ಸ್ವಂತ ಮಗುವನ್ನು ಸಾಯಿಸಿ ತಾಯಿಯೂ ಆತ್ಯಹತ್ಯೆ ಗೆ ಯತ್ನ

ಬೆಂಗಳೂರು: ಆಂಧ್ರಪ್ರದೇಶದಿಂದ ಕೆಲಸಕ್ಕಾಗಿ ಬಂದು ಕೆ.ಆರ್.ಪುರಂ ನಲ್ಲಿ ವಾಸವಿದ್ದ ಕುಟುಂಬದಲ್ಲಿ ಪತ್ನಿಗೆ ಮದುವೆಗೂ ಮೊದಲಿನಿಂದಲೇ ಅನಾರೋಗ್ಯವಿತ್ತು. ಆದರೆ, ಕೋವಿಡ್‌ ಅವಧಿಯಲ್ಲಿ ಗಂಡ ಮನವೊಲಿಕೆ ಮಾಡಿ ಸಂಸಾರ ಮಾಡಿದ್ದು, ಒಂದು ಮಗು ಕೂಡ ಹುಟ್ಟಿದೆ. ಆದರೆ, ಮಗುವನ್ನು ಮೊದಲಿನಿಂದಲೂ ಪತ್ನಿ ಇಷ್ಟಪಡುತ್ತಿರಲಿಲ್ಲ. ಇನ್ನು ಮೂರು ವರ್ಷಗಳ ವರ್ಕ್‌ ಫ್ರಂ ಹೋಮ್‌ ಕೆಲಸ ಮಾಡುತ್ತಾ ಗಂಡ ಊರಲ್ಲಿದ್ದರಿಂದ, ಮನೆಯವರೇ ಮಗುವನ್ನು ನೋಡಿಕೊಳ್ಳುತ್ತಿದ್ದರು. ಆದರೆ, 2023ರ ಡಿಸೆಂಬರ್‌ನಲ್ಲಿ ವರ್ಕ್‌ಫ್ರಮ್ ಹೋಮ್ ಕೆಲಸ ಪೂರ್ಣಗೊಂಡಿದ್ದು, ಕಚೇರಿಗೆ ಬಂದು ಕೆಲಸ ಮಾಡುವಂತೆ ಕಂಪನಿಯಿಂದ ತಿಳಿಸಲಾಗಿದೆ.

ಕುಟುಂಬ ಸಮೇತಾ ಬೆಂಗಳೂರಿನ ಹೊರವಲಯ ಕೆ.ಆರ್. ಪುರಂನ ಸೀಗೆಹಳ್ಳಿಯಲ್ಲಿ ವಾಸವಿದ್ದರು. ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ಈ ದರಿದ್ರ ಮಗುವನ್ನು ನೋಡಿಕೊಳ್ಳಲಾಗುವುದಿಲ್ಲ. ಇದನ್ನು ನಾನೇ ಸಾಯಿಸುತ್ತೇನೆ ಎಂದು ಹೇಳುತ್ತಿದ್ದಳಂತೆ. ಗಂಡ ಸಮಾಧಾನ ಮಾಡಿ ಪತ್ನಿಗೆ ಬುದ್ಧಿ ಹೇಳುತ್ತಿದ್ದನಂತೆ, ಕೆಲಸದ ಒತ್ತೆ ಹೆಚ್ಚಾದಾಗ ಸಮಾಧಾನದಿಂದ ಬುದ್ಧಿ ಹೇಳದೇ ಹೆಂಡತಿಯೊಂದಿಗೆ ಜಗಳವನ್ನೂ ಮಾಡಿದ್ದಾನೆ.

ಗಂಡನೇ ಮುನೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ. ಮಾ.17ರ ಬೆಳಗ್ಗೆ ಗಂಡ ದೇವಸ್ಥಾನದಲ್ಲಿರುವಾಗ ಪತ್ನಿ ಊರಿಗೆ ಕರೆ ಮಾಡಿ ನಾನು ಮಗುವನ್ನು ಸಾಯಿಸಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತನ್ನ ತಾಯಿಗೆ ಕರೆ ಮಾಡಿ ಹೇಳಿದ್ದಾಳೆ. ಇದರಿಂದ ಆಂಧ್ರಪ್ರದೇಶದಲ್ಲಿದ್ದ ಪತ್ನಿಯ ತಾಯಿ ಅತ್ತೆಯ ಬೇರೊಬ್ಬರ ಫೋನಿನಿಂದ ಕರೆ ಮಾಡಿ ಹೆಂಡತಿ ಹೇಳಿದ ವಿಚಾರ ತಿಳಿಸಿದ್ದಾರೆ.

ಹೆಂಡತಿ ಅನಾಹುತ ಮಾಡಿಕೊಳ್ಳುತ್ತಾಳೆ ಎಂಬ ಗಾಬರಿಯಿಂದ ಪತಿ ದೇವಸ್ಥಾನದಲ್ಲಿರುವಾಗಲೇ ಪಕ್ಕದ ಮನೆಯವರಿಗೆ ಕರೆ ಮಾಡಿ ಮನೆಯಲ್ಲಿ ನೋಡುವಂತೆ ತಿಳಿಸಿದ್ದಾರೆ. ಆಗ ಮನೆಗೆ ಬಂದ ಗಂಡನ ಸ್ನೇಹಿತ ಕಿಟಕಿಯಲ್ಲಿ ನೋಡಿದಾಗ ಹಾಲ್‌ನಲ್ಲಿ ರಕ್ತ ಬಿದ್ದಿರುವುದು ಕಂಡಿದೆ. ಕೂಡಲೇ, ಅಕ್ಕಪಕ್ಕದವರನ್ನು ಕರೆಸಿ ಬಾಗಿಲು ಒಡೆದು ನೋಡಿದಾಗ ತಾಯಿ ಮಗು ಇಬ್ಬರೂ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಆಗ ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇವಸ್ಥಾನದಿಂದ ಟ್ರಾಫಿಕ್‌ನಲ್ಲಿ ವಾಪಸ್ ಬರುವಷ್ಟರಲ್ಲಿ ತಡವಾಗಿದ್ದರಿಂದ ಸೀದಾ ಆಸ್ಪತ್ರೆಗೆ ಗಂಡ ಬಂದು ನೋಡಿದಾಗ ಮಗು ಆಗಲೇ ಮೃತಪಟ್ಟಿತ್ತು. ಇನ್ನು ಹೆಂಡತಿ ಚಿನ್ನಾಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಫ್ರೆಶ್ ನ್ಯೂಸ್

Latest Posts

Featured Videos