ಶಿಮ್ಲಾ: ಹಿಮಾಚಲ ಪ್ರದೇಶದ ಕಿನೌರು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ್ದ ಸ್ಥಳದಲ್ಲಿ ಶನಿವಾರ ಆರು ಮೃತದೇಹಗಳು ಪತ್ತೆಯಾಗಿವೆ, ಒಟ್ಟಾರೇ ಮೃತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇನ್ನು ನಾಪತ್ತೆಯಾಗಿರುವ 9 ಜನರಿಗಾಗಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕ ಸುದೇಶ್ ಕುಮಾರ್ ಮೊಕ್ತಾ ಹೇಳಿದ್ದಾರೆ.
ಈ ಮಧ್ಯೆ ಭೂ ಕುಸಿತ ಸಂಭವಿಸಿದ ಪ್ರದೇಶದಲ್ಲಿ ಭಾರೀ ಗಾತ್ರದ ಬಂಡೆಗಳು ಬೀಳುತ್ತಿರುವುದು ನಿರಂತರವಾಗಿ ಮುಂದುವರೆದಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೂ ಎಲ್ಲಾ ವಿಧದ ವಾಹನಗಳನ್ನು ನಿರ್ಬಂಧಿಸಬೇಕು ಎಂದು ನಿಚಾರ್ ಉಪ- ವಿಭಾಗೀಯ ಮ್ಯಾಜಿಸ್ಟ್ರೇಟ್ ಮನ್ ಮೋಹನ್ ಸಿಂಗ್ ಆದೇಶಿಸಿದ್ದಾರೆ.