ಬೆಂಗಳೂರು: ಇಂಗ್ಲೆಂಡ್ ವಿರುದ್ಧ ಭಾರತ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ತಂಡಕ್ಕೆ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಗುಡ್ ನ್ಯೂಸ್ ಸಿಕ್ಕಿದೆ.
ಫೆಬ್ರವರಿ 23ರಂದು ರಾಂಚಿಯಲ್ಲಿ ಆರಂಭವಾಗಲಿರುವ ಪಂದ್ಯಕ್ಕೆ ಬ್ಯಾಟರ್ ಕನ್ನಡಿಗ ಕೆ ಎಲ್ ರಾಹುಲ್ ಟೀಮ್ ಇಂಡಿಯಾಗೆ ಮರಳುವ ಸಾಧ್ಯತೆಗಳಿವೆ. ಉಪನಾಯಕ ವೇಗ ವಿಶ್ರಾಂತಿ ನೀಡುವ ನಿರೀಕ್ಷೆ ಇದೆ.
ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಕಾರಣ ಎರಡನೇ ಟೆಸ್ಟ್ನಿಂದ ಹೊರಗುಳುತ್ತಿದ್ದ ರಾಹುಲ್ ಪುನಸ್ಚೇತನಕ್ಕಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಆಗಮಿಸಿದ್ದರು. ಅಂತಿಮ ಮೂರು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ರಾಹುಲ್ ಬಲತೋಡೆ ಸ್ನಾಯುವಿನ ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆ ಮುನ್ನೆಚ್ಚರಿಕೆ ವಾಗಿ ರಾಜ್ಕೋಟ್ ಟೆಸ್ಟ್ನಿಂದಲೂ ಹೊರಬಿದ್ದರು ಈಗ ಬಹುತೇಕ ಫಿಟ್ ಆಗಿರುವ ಕೆ.ಎಲ್. ರಾಹುಲ್ 11ರ ಬಳಗಕ್ಕೆ ಮರಳಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.