ಬೆಂಗಳೂರು : ಇತ್ತೀಚೆಗೆ ನಡೆದ ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ (ರಾಜ್ಯ ಮಾಧ್ಯಮಗಳ ಪತ್ರಕರ್ತರ ಸಂಸ್ಥೆ) ಆಡಳಿತ ಮಂಡಳಿ ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಶಿವಕುಮಾರ್ ಬೆಳ್ಳಿತಟ್ಟೆ ಅವರನ್ನು ಆಯ್ಕೆ ಮಾಡಲಾಯಿತು.
ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿರುವ ಸಂಘದ ಕಚೇರಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಮಂಜುನಾಥ, ಅಧ್ಯಕ್ಷತೆಯ ನಡೆದ ಸಭೆಯಲ್ಲಿ ಶಿವಕುಮಾರ್ ಬೆಳ್ಳಿತಟ್ಟೆ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ನಕಿರೆಕಂಟಿ ಸ್ವಾಮಿ, ಟಿ ಮಂಜುನಾಥ್ ರವಿಕುಮಾರ್ ಸುರೇಶ್ ಹಾಗೂ ಎಲ್ಲಾ ಪದಾಧಿಕಾರಿಗಳು ಇನ್ನಿತರರಿದ್ದರು.