ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಜನರು ಮೊಸರು, ಮಜ್ಜಿಗೆ ತೆಗದುಕೊಳ್ಳಲು ಮುಂದಾಗುತ್ತಿದ್ದು, ಈ ವರ್ಷದ ಬೇಸಿಗೆಯಲ್ಲಿ ಕರ್ನಾಟಕ ಹಾಲು ಒಕ್ಕೂಟಗೆ ಭರ್ಜರಿ ವ್ಯಾಪಾರವಾಗುತ್ತಿದೆ.
ಬಿಸಿಲಿನ ತಾಪ ತಾಳಲಾರದೆ ಸಿಲಿಕಾನ್ ಸಿಟಿ ಮಂದಿ ತಂಪು ಪಾನಿಯಗಳತ್ತ ಮುಖ ಮಾಡುತ್ತಿದ್ದಾರೆ. ಹಣ್ಣಿನ ಜ್ಯೂಸ್ಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೆಎಂಎಫ್ನ ನಂದಿನಿ ಮೊಸರು, ಮಜ್ಜಿಗೆ, ಐಸ್ ಕ್ರೀಮ್ಗಳಿಗೆ ಫುಲ್ ಡಿಮ್ಯಾಂಡ್ ಬಂದಿದೆ. ಒಂದೇ ದಿನ ಬೆಂಗಳೂರಿನಲ್ಲಿ 16 ಲಕ್ಷ ಲೀಟರ್ ಮೊಸರು ಮಾರಾಟವಾಗಿದ್ದು, ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿದೆ.
ಒಟ್ಟಿನಲ್ಲಿ, ಬಿಸಿಲು ಜಾಸ್ತಿಯಾಗಿರುವುದರಿಂದ ತಂಪು ಪಾನಿಯಗಳ ಬೆಲೆ ಗಗನಕ್ಕೆ ಏರಿಕೆಯಾಗಿದ್ದು, ಬೆಲೆ ಕಡಿಮೆ ಇರುವ ನಂದಿನಿ ಉತ್ಪನ್ನಗಳಿಗೆ ಜನರು ಡಿಮ್ಯಾಂಡ್ ಮಾಡುತ್ತಿದ್ದು, ಈ ವರ್ಷ ಬೇಸಿಗೆಯಲ್ಲಿ ಕೆಎಂಎಫ್ ಹೊಸ ದಾಖಾಲೆಯನ್ನು ಬರೆದಿದೆ.