ಬೆಂಗಳೂರು, ನ. 21 : ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ವಿದ್ಯಾರ್ಥಿಯನ್ನು ಕೊಚ್ಚಿ ಕೊಂದ ಘಟನೆ ನಂದಿನಿ ಲೇಔಟ್ನ ಸರಸ್ವತಿಪುರದಲ್ಲಿ ನಡೆದಿದೆ.
ಉಮಾ ಮಹೇಶ್ವರ(20) ಕೊಲೆಯಾದ ವಿದ್ಯಾರ್ಥಿ.
ಗಣೇಶ ಲೇಔಟ್ನಲ್ಲಿ ಯುವಕರ ಗುಂಪು ಗಲಾಟೆ ಮಾಡಿಕೊಂಡಿತ್ತು. ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಹಿನ್ನೆಲೆ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಉಮಾ ಮಹೇಶ್ವರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.