ಕೊಡಗು, ಆ.14 : ಕೊಡಗು ಜಿಲ್ಲೆಯ ವಿರಾಜಪೇಟೆಯ ಬಾಳೆಲೆ ಗ್ರಾಮದಲ್ಲಿ ಇಂದು ಬೆಳಗ್ಗೆ ಶಿಕ್ಷಕಿಯ ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿದೆ. ಆಶಾ ಕಾವೇರಮ್ಮಳ (50) ವರ್ಷದ ಆಶಾ ಕಾವೇರಮ್ಮಳ ಮೇಲೆ 60 ವರ್ಷದ ಜಗದೀಶ್ ಕಣ್ಣು ಹಾಕಿದ್ದ. ಆಶಾಗೆ ಪತಿ ಇರಲಿಲ್ಲ. ಹೀಗಾಗಿ ಪತ್ನಿ ಇಲ್ಲದ ಜಗದೀಶ್ ಶಿಕ್ಷಕಿ ಆಶಾಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಎರಡು ವರ್ಷಗಳ ಹಿಂದೆ ಜಗದೀಶ್ ಅತ್ಯಾಚಾರಕ್ಕೆ ಯತ್ನಿಸಿದ್ದ ಅಂತಾ ಪೊಲೀಸ್ ಠಾಣೆಯಲ್ಲಿ ಆಶಾ ದೂರು ನೀಡಿದ್ರು. ಆಗ ಪೊಲೀಸರು ಆತನನ್ನು ಬಂಧಿಸಿದ್ದರು. ಆದ್ರೆ ಆತ ಜಾಮೀನಿನ ಮೇಲೆ ಹೊರಬಂದಿದ್ರೂ ಮತ್ತೆ ಶಿಕ್ಷಕಿಯ ಹಿಂದೆ ಬಿದ್ದಿದ್ದ. ಜಗದೀಶ್ನನ್ನು ಶಿಕ್ಷಕಿ ಆಶಾ ತಿರಸ್ಕರಿಸಿದ್ದಾರೆ. ಇದ್ರಿಂದ ಆಕ್ರೋಶಗೊಂಡ ಆತ, ಆಶಾ ಮೇಲೆ ಗುಂಡಿನ ಮಳೆಗರೆದಿದ್ದಾನೆ. ಬಳಿಕ ತಾನೂ ಕಾಫಿ ತೋಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.