ವಿಜಯಪುರ , ಅ . 3 : ಚಡಚಣ ತಾಲೂಕಿನ ಟಾಕಳಿ ಗ್ರಾಮದಲ್ಲಿ ಮದ್ಯವ್ಯಸನಿಯಾಗಿದ್ದ ಮಗ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಅಣ್ಣಪ್ಪ ತೊರವಿ (55) ಕೊಲೆಯಾದ ವ್ಯಕ್ತಿ. ಮಗ ಸಂಜೀವ ತೊರವಿ (35) ತಂದೆಯನ್ನೇ ಹತ್ಯೆ ಮಾಡಿದ ಪಾಪಿ ಮಗ. ಈತ ವಿಪರೀತ ಮದ್ಯವ್ಯಸನಿಯಾಗಿದ್ದ. ಇದೇ ಕಾರಣಕ್ಕೆ ಮನೆಯಲ್ಲಿ ಪದೇಪದೆ ಜಗಳವೂ ನಡೆಯುತ್ತಿತ್ತು.
ಬುಧವಾರ ರಾತ್ರಿ ಕೂಡ ಕುಡಿದು ಬಂದ ಸಂಜೀವ ಪತ್ನಿ ಜತೆ ಜಗಳವಾಡುತ್ತಿದ್ದ. 500 ರೂಪಾಯಿ ಕೊಡುವಂತೆ ಪೀಡಿಸುತ್ತಿದ್ದ. ಇದೇ ವೇಳೆ ಜಗಳ ಬಿಡಿಸಲು ಹೋದ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.
ಚಡಚಣ ಪೋಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.