ಸಚಿವ ಸ್ಥಾನಕ್ಕೆ ಲಾಭಿ ಮಾಡಿಲ್ಲ, ನನ್ನ ತೀರ್ಮಾನ ನಾಳೆ ಪ್ರಕಟಿಸುವೆ ಎಂದ ರಾಮಲಿಂಗಾ ರೆಡ್ಡಿ

ಸಚಿವ ಸ್ಥಾನಕ್ಕೆ ಲಾಭಿ ಮಾಡಿಲ್ಲ, ನನ್ನ ತೀರ್ಮಾನ ನಾಳೆ ಪ್ರಕಟಿಸುವೆ ಎಂದ ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯ​ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಇಂದು ಎಲ್ಲಾ ಸಿದ್ಧತೆಗಳು  ನಡೆದಿದ್ದು, ಈ ಮಧ್ಯೆ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿದವನು ನಾನು. ಸಚಿವ ಸ್ಥಾನಕ್ಕೆ ಯಾವುದೇ ಲಾಬಿ ಮಾಡಿಲ್ಲ. ನಾಳೆ ನನ್ನ ತೀರ್ಮಾನವನ್ನು ಪ್ರಕಟಿಸುತ್ತೇನೆ ಎಂದು ಹೇಳಿದ್ದಾರೆ.

ಬೆಂಬಲಿಗರಿಂದ ಧರಣಿಸಚಿವ ಸಂಪುಟದಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದಕ್ಕೆ ಸುಮಾರು 150ಕ್ಕೂ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಧರಣಿ ನಡೆಸಿ, ಘೋಷಣೆಗಳನ್ನು ಕೂಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos