ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ಗಾಗಿ ಬಿಜೆಪಿ-ಜೆಡಿಎಸ್ ನಡುವೆ ತೀವ್ರ ಪೈಪೋಟಿ ಶುರುವಾಗಿದ್ದು, ಪಕ್ಷ ಸಂಘಟನೆ ಮರೆತ ಜೆಡಿಎಸ್ ಟಿಕೆಟ್ಗಾಗಿ ಒತ್ತಾಯಿಸುತ್ತಿರುವುದು ಅಚ್ಚರಿ ತಂದಿದೆ.
ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಆಗಿರುವ ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ. ಹಾಸನ ಮಂಡ್ಯದಲ್ಲಿ ಸದ್ಯ ಬಿಜೆಪಿ ಸಂಸದರಿಲ್ಲ. ಹಾಸನದಲ್ಲಿ ಜೆಡಿಎಸ್ ಪ್ರಜ್ವಲ್ ರೇವಣ್ಣ , ಮಂಡ್ಯದಲ್ಲಿ ಪಕ್ಷೇತರ ಸಂಸದೆ ಸುಮಲತಾ, ಕೋಲಾರದಲ್ಲಿ ಮಾತ್ರ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಅವರಿಗೆ ಟಿಕೆಟ್ ನಿರಾಕರಿಸಿ ಜೆಡಿಎಸ್ ಒಪ್ಪಂದದ ಪ್ರಕಾರ ಕೋಲಾರವನ್ನು ಜೆಡಿಎಸ್ ಗೆ ಬಿಜೆಪಿ ಬಿಟ್ಟು ಕೊಟ್ಟಿದೆ.