ತಲೆಮೇಲೆ ಕಲ್ಲು ಹಾಕಿ ಕೊಲೆ

ತಲೆಮೇಲೆ ಕಲ್ಲು ಹಾಕಿ ಕೊಲೆ

ಬೆಂಗಳೂರು, ಜು. 31 : ಚಾಕವಿನಿಂದ ಮಹಿಳೆಯೊಬ್ಬರನ್ನು ಮನಸೋ ಇಚ್ಚೆ ಇರಿದು ತಲೆಮೇಲೆ ಕಲ್ಲು ಎತ್ತಿಹಾಕಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ. ಕೊಲೆಯಾದ ಮಹಿಳೆಯು ಸುಮಾರು 30 ವರ್ಷ ವಯಸ್ಸಿನವರಾಗಿದ್ದು, ಮೇಲ್ನೊಟಕ್ಕೆ ಉತ್ತರ ಭಾರತೀಯಂತೆ ಕಂಡು ಬರುತ್ತಿದ್ದಾರೆ. ಸದ್ಯಕ್ಕೆ ಆಕೆಯ ಹೆಸರು, ವಿಳಾಸ, ಪತ್ತೆಯಾಗಿಲ್ಲ ಎಂದು ಡಿಸಿಪಿ ಬೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ಮಹಿಳೆ ಕತ್ತು, ಹೊಟ್ಟೆ, ಕೈ, ಇನ್ನಿತರ ಭಾಗಗಳಿಗೆ ಮನಸೋ ಇಚ್ಛೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು ನಂತರ, ಆಕೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ತಡರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಿಂಬಾಗದ ಗೇಟ್ ಬಳಿ ಇಂದು ಬೆಳಗ್ಗೆ 6 ವೇಳೆ ವಾಯು ವಾಯು ವಿಹಾರಕ್ಕೆ ಹೋದ ಸ್ಥಳೀಯರು, ಮೃತ ದೇಹವನ್ನು ಕಂಡು ಮಾಹಿತಿ ನೀಡಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಬಾಗಲೂರು ಪೊಲೀದರು ಪರೀಶಿಲನೆ ನಡೆಸಿ, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos