ಕೊಪ್ಪಳ, ಅ. 21 : ಡಿಸಿಎಂ ಲಕ್ಷ್ಮಣ ಸವದಿ ಗವಿಮಠಕ್ಕೆ ಭೇಟಿ ನೀಡಿ ಗವಿಶ್ರೀಗಳ ಆಶೀರ್ವಾದ ಪಡೆದರು. ಮುಂದಿನ ದಿನಮಾನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಈ ಕುರಿತು ಮನವಿ ಮಾಡಲಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನ ಮುಡಿಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ.ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ. ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ.
ದರು.