ಕೊಪ್ಪಳ, ಮಾ. 22, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೆ ಬಿಜೆಪಿ ಹೈ ಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ರವರ ಹೆಸರು ಪಟ್ಟಿಯಲ್ಲಿ ಇಲ್ಲದಿರುವದರಿಂದ ಹಾಲಿ ಸಂಸದ ಕರಡಿ ಸಂಗಣ್ಣಗೆ ಭಾರಿ ನಿರಾಸೆ ಮೂಡಿಸಿದೆ.
ಹೌದು. ಬಿಜೆಪಿ ಮೊದಲ ಪಟ್ಟಿಯಲ್ಲಿ ಹಾಲಿ ಸಂಸದರಿಗೆ ಮಣೆ ಹಾಕಿದ್ದು, ಆದರೆ ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ಇದ್ದರು ಕೂಡ ಮೊದಲ ಪಟ್ಟಿಯಲ್ಲಿ ಅವರ ಹೆಸರು ಮಿಸ್ಸ ಆಗಿದ್ದು, ಎಲ್ಲೋ ಅವರಿಗೆ ಟಿಕೇಟ್ ತಪ್ಪ ಬಹುದು ಎಂದು ಹೇಳಲಾಗುತ್ತಿದೆ.
ಟಿಕೇಟ್ ಕೊಡೋದು ಬಿಡೋದು ಹೈ ಕಮಾಂಡಗೆ ಬಿಟ್ಟ ವಿಚಾರ, ಇನ್ನೊಂದು ಪಟ್ಟಿ ಇದೇ ಯಾಕೇ ನಿರಾಸೆಯಾಗಬೇಕು, ಹೈ ಕಮಾಂಡನ ಕಾದು ನೋಡುವ ತಂತ್ರ ಇರಬಹುದು, 2ನೇ ಪಟ್ಟಿಯಲ್ಲಿ ನನ್ನ ಹೆಸರು ಘೋಷಣೆ ಆಗಬಹುದು ಎಂದು ಹಾಲಿ ಸಂಸದ ಕರಡಿ ಸಂಗಣ್ಣ ವಿಶ್ವಾಸ ವ್ಯಕ್ತಪಡಿಸಿದರು.