ಕೊಪ್ಪಳ , ಮೇ. 28, ನ್ಯೂಸ್ ಎಕ್ಸ್ ಪ್ರೆಸ್ : ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಗಳು ನಡೆಯುತ್ತಿದ್ದು, ಕುಷ್ಟಗಿ ಕಾಂಗ್ರೆಸ್ ಶಾಸಕ ಅಮರೇಗೌಡ ಭಯ್ಯಾಪೂರ ಸಚಿವ ಸ್ಥಾನ ಸಿಗದ ಹಿನ್ನಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಎಂದು ಅಮರೇಗೌಡ ಬೆಂಬಲಿಗ ಮಾನಪ್ಪ ತಳವಾರ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡಿದ್ದಾರೆ.
ಈ ಹಿಂದೆಯೂ ಕಾಂಗ್ರೆಸ್ ಶಾಸಕ ಅಮರೇಗೌಡ ಭಯ್ಯಾಪೂರ ರಾಜೀನಾಮೆ ನೀಡುವ ಮಾತುಗಳು ಕೇಳಿಬಂದಿದ್ದು, ಇದೀಗ ಮತ್ತೊಮ್ಮೆ ಸಂಪುಟ ವಿಸ್ತರಣೆ ವಿಚಾರದ ಚರ್ಚೆ ಬಂದ ವೇಳೆಯೇ ರಾಜೀನಾಮೆ ಬಗ್ಗೆ ಸುದ್ದಿಯಾಗಿದೆ.