ಮಾಜಿ ಸಿಎಂ ಹಾಲಿ ಸಿಎಂ ಬೇಗ ಗುಣಮುಖರಾಗಲಿ

  • In State
  • August 4, 2020
  • 167 Views
ಮಾಜಿ ಸಿಎಂ ಹಾಲಿ ಸಿಎಂ ಬೇಗ ಗುಣಮುಖರಾಗಲಿ

ಗುಲ್ಬರ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಲ್ಬರ್ಗ ಗಾಣಿಗಾಪುರದ ದತ್ತಾತ್ರೇಯ ಸ್ವಾಮಿ ದೇಗುಲಕ್ಕೆ ತೆರಳಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸೋಂಕು ತಗುಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಸಿಎಂ ಯಡಿಯೂರಪ್ಪ ಅವರು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಹಾಲಿ ಶಾಸಕರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ್, ಶಾಸಕರಾದ ಅಜೇಯ್ ಕುಮಾರ್ ಸಿಂಗ್, ಎಂ.ವೈ. ಪಾಟೀಲ್, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತಿತರರು ಜೊತೆಯಲ್ಲಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos