ಕರ್ನಾಟಕದಲ್ಲಿ ಘಟಾನುಘಟಿಗಳಿಗೆ ಹಿನ್ನೆಡೆ..!

ಕರ್ನಾಟಕದಲ್ಲಿ ಘಟಾನುಘಟಿಗಳಿಗೆ ಹಿನ್ನೆಡೆ..!

ಬೆಂಗಳೂರು, ಮೇ. 23, ನ್ಯೂಸ್‍ ಎಕ್ಸ್ ಪ್ರೆಸ್‍: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತಎಣಿಕೆ ಆರಂಭವಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಮೂರು ಘಟಾನುಘಟಿ ನಾಯಕರಿಗೆ ಹಿನ್ನಡೆಯಾಗಿದೆ. ಕೋಲಾರದಲ್ಲಿ ಕೆಎಚ್ ಮುನಿಯಪ್ಪ, ಕಲಬುರಗಿಯಲ್ಲಿ ಮಲ್ಲಿಕಾರ್ಜು ಖರ್ಗೆ ಹಾಗೂ ತುಮಕೂರಿನಲ್ಲಿ ಎಚ್‌ಡಿ ದೇವೇಗೌಡ ಅವರಿಗೆ ಹಿನ್ನಡೆಯಾಗಿದೆ. ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದ ಗೌಡಗೆ ಹಿನ್ನೆಡೆಯಾಗಿದೆ.

ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು 1196 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕೋಲಾರದಲ್ಲಿ ಮುನಿಸ್ವಾಮಿ, ಹಾಗೂ ಕಲಬುರಗಿಯಲ್ಲಿ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.ಕಲಬುರಗಿಯಲ್ಲಿ 14 ಸಾವಿರ ಮತಗಳ ಅಂತರದಿಂದ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos