ಬೆಂಗಳೂರು: ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಭ್ಯರ್ಥಿಗಳು ಭರ್ಜರಿ ಮತ ಬೇಟೆಯಾಚಿಸುತ್ತಿದ್ದಾರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೌಮ್ಯ ರೆಡ್ಡಿ ಅವರು ಸ್ಪರ್ಧಿಸುತ್ತಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸೌಮ್ಯರೆಡ್ಡಿ ಅವರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಬೆಂಬಲವಾಗಿ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ನಾಯಂಡನಹಳ್ಳಿ ಸುತ್ತಮುತ್ತ ತೆರೆದ ವಾಹನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರ ಪರವಾಗಿ ಶ್ರೀ ಎಂ. ಕೃಷ್ಣಪ್ಪನವರ ಮತ್ತು ಶ್ರೀ ಕೆ. ಪ್ರಿಯಕೃಷ್ಣ ರವರು ಮತಯಾಚನೆ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವಾರು ನಾಯಕರು ಹಾಗೂ ಸಾವಿರಾರು ಜನರು ಭಾಗಿಯಾಗಿದ್ದಾರೆ.