ಡಿಕೆಶಿ ಅವರ ಮೇಲೆ ನಮಗೆ ಯಾವ ನಂಬಿಕೆಗಳು ಉಳಿದಿಲ್ಲ: ಕೆಎಸ್‌ ಈಶ್ವರಪ್ಪ

ಡಿಕೆಶಿ ಅವರ ಮೇಲೆ ನಮಗೆ ಯಾವ ನಂಬಿಕೆಗಳು ಉಳಿದಿಲ್ಲ: ಕೆಎಸ್‌ ಈಶ್ವರಪ್ಪ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ಫುಡ್​​ಪ್ರಿಯರ ಅಚ್ಚುಮೆಚ್ಚಿನ ತಾಣ ರಾಮೇಶ್ವರಂ ಕೆಫೆಯಲ್ಲಿ IED ಬಾಂಬ್ ಸ್ಫೋಟಿಸಿದ್ದಾರೆ. ಸ್ಥಳದಲ್ಲಿ ಬ್ಯಾಟರಿ, ನಟ್​ಗಳು ಪತ್ತೆಯಾಗಿದೆ. ಈ ಘಟನೆ ರಾಜ್ಯ ರಾಜಧಾನಿ ಬೆಂಗಳೂರನ್ನು ಅಕ್ಷರಶಃ ದಂಗಾಗಿಸಿದೆ. ಸದ್ಯ ಈ ವಿಚಾರವಾಗಿ ವಿರೋಧ ಪಕ್ಷದ ಕೆಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆ‌ ಶಿವಕುಮಾರ್ ಬಾಯಿಗೆ ಬಂದಂತೆ ಹೇಳಿಕೆ‌ ಕೊಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೊದಲು ಅದನೆಲ್ಲಾ ನಿಲ್ಲಿಸಿ. ಮೊದಲು ಡಿಕೆ ಶಿವಕುಮಾರ್ ಬಾಯಿಗೆ ಬೀಗ ಹಾಕಿ. ಡಿಕೆಶಿ ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಾಗಿದೆ. ಅವರ ಮೇಲೆ ನಮಗೆ ಯಾವ ನಂಬಿಕೆಗಳು ಉಳಿದಿಲ್ಲ.

ಅವರು ಹೇಳಿದನ್ನು ಜನ ಕೇಳಬೇಕು ಅಂಥ ಏನು ಇಲ್ಲ. ಇದು ಭಯೋತ್ಪಾದಕರ ಕೃತ್ಯ ಅಲ್ಲದೇ ಮತ್ತೇನು. ಹೋಟೆಲ್‌ನಲ್ಲಿ ಯಾರೋ ಮಕ್ಕಳು ಪಟಾಕಿ ಹೊಡೆದಿದ್ದಾರಾ? ಅಥವಾ ಬಲೂನ್ ಹೊಡೆದಿದ್ದಾರಾ? ಅಲ್ಲಿ ಆಗಿರುವುದು ಬಾಂಬ್ ಸ್ಪೋಟ. ಇದು ಭಯೋತ್ಪಾದಕರ ಕೃತ್ಯ. ಇದು ಗುಪ್ತಚರ ಇಲಾಖೆಯ ವೈಫಲ್ಯ, ಈ ವೈಫಲವ್ಯವನ್ನು ಸಿಎಂ ಮೊದಲು ಒಪ್ಪಿಕೊಳ್ಳಬೇಕು.

ಫ್ರೆಶ್ ನ್ಯೂಸ್

Latest Posts

Featured Videos