ಉಡುಪಿ, ಜು. 30: ಎಸ್ ಎಂ ಕೃಷ್ಣ ಅವರ ಅಳಿಯ, ಕಾಫಿಯನ್ನು ಲೋಕದೆಲ್ಲೆಡೆ ಪಸರಿಸಿದ ಯಶಸ್ವಿ ಉದ್ಯಮಿ ವಿ ಜಿ ಸಿದ್ದಾರ್ಥ ಅವರು ಕಾಣೆಯಾಗಿರುವ ಸುದ್ದಿ ನಿಜಕ್ಕೂ ಬೇಸರ ತಂದಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕು.ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ರಾಜ್ಯ ಸರಕಾರದ ಜೊತೆ ಕೇಂದ್ರ ಸರಕಾರದ ಸಹಾಯವನ್ನು ಕೋರಿ ರಾಜ್ಯದ ಬಿಜೆಪಿ ಸಂಸದರ ತಂಡವು ಕೇಂದ್ರ ಗೃಹ ಮಂತ್ರಿ ಶ್ರೀ ಅಮಿತ್ ಶಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿ ಮಾಡಿ ಈ ಸಂಬಂಧ ಮನವಿ ಮಾಡಿದೆ.